ತಾಯ ಹೃದಯ ಕಮಲದಲ್ಲಿ ಅರಳುವುದೇ ಜೀವನ
ತೊದಲ ನುಡಿಯ ತಪ್ಪುಗಳೇ ಜೀವನ
ಮೊದಲ ಗುರುವಿನಿಂದ ಕಲಿತ ಪಾಠವೇ ಜೀವನ
ಸುಂದರ ದಿನಗಳ ಅರ್ಥೈಸಿಕೊಳ್ಳುವುದೇ ಜೀವನ
ಸರ್ವರ ನುಡಿ ಕಲಿತು ಸರ್ವಜ್ಞನಾಗುವುದೇ ಜೀವನ
ಗುರಿಯರಿತು ಸಾಧಿಸುವುದೇ ಜೀವನ
ಸಮಸ್ಯೆಗಳ ಬೆನ್ನಟ್ಟುವ ದೈರ್ಯವೇ ಜೀವನ
ತನು ಮನವ ಶುದ್ಧಿಕರಣವೇ ಜೀವನ
ಆದರ್ಶ ಮೌಲ್ಯವುಳ್ಳ ಸಮಾಜ ನಿರ್ಮಾಣವೇ ಜೀವನ
ಉದ್ದಕ್ಕೂ ಪ್ರತಿಯೊಬ್ಬರನ್ನು ಅರ್ಥಮಾಡಿಕೊಳ್ಳುವುದೇ ಜೀವನ
ಸಮಾಜಕ್ಕೆ ತನ್ನದೆಯಾದ ಕೊಡುಗೆ ನೀಡುವುದೇ ಜೀವನ
ಸಂಸಾರದ ಹಣತೆಯಲ್ಲಿ ಬೆಳಕಾಗುವುದೇ ಜೀವನ
ನಿಸರ್ಗ ನಿಯಮಗಳ ಅರಿಯುವುದೇ ಜೀವನ
ನೆಲೆ ನಿಲ್ಲಲು ಅವಕಾಶವೇ ಇಲ್ಲದ ಜೀವನ
ಕೊನೆಗೊಂದು ದಿನ ಜೀವನದ ಅಂತ್ಯವೇ ಜೀವನ.
ಸೋಮವಾರ, ಜುಲೈ 19, 2021
ಜೀವನ
ನನ್ನಾಸೆ.
ಜಗತ್ತನೇ ಬೆಳಗುವ ಸೂರ್ಯನ ಹಾಗೆ ಪ್ರಜ್ವಲಿಸುವಾಸೆ,
ಗ್ರಹ ತಾರೆಯರ ಜೊತೆ ಆಟವಾಡುವಾಸೆ,
ತಿಂಗಳನ ಬೆಳಕಲ್ಲಿ ಮಿಯುವಾಸೆ,
ಹಚ್ಚ ಹಸುರಿನ ಮರದಲ್ಲಿ ಚಿಗುರುವಾಸೆ,
ಹಕ್ಕಿಗಳ ಕೊರಳ ಸ್ವರವಾಗುವಾಸೆ,
ಜೇನಗೂಡಲ್ಲಿ ಬೆರೆತು ಒಗ್ಗಟ್ಟು ಪ್ರದರ್ಶಿಸುವಾಸೆ,
ದುಂಬಿಗೆ ಆಹಾರ ನೀಡುವ ಹೂವಾಗುವಾಸೆ,
ಅನ್ನದಾತನ ಬಾಳ ಬೆಳಗುವ ವರ್ಷವಾಗುವಾಸೆ,
ಹಣತೆಯ ತೈಲದಲ್ಲಿ ಬೆರೆತು ಬೆಳಕಾಗುವಾಸೆ,
ಕೆಟ್ಟವರ ಹೃದಯದಲ್ಲಿ ಕುಳಿತು ಬದಲಾಯಿಸುವಾಸೆ,
ಬಸವನುದಿಸಲಿ ಎಂದು ತಪಗೈಯುವಾಸೆ,
ಬುದ್ಧ, ಗಾಂಧೀಯರ ಶಾಂತಿ ಮಂತ್ರವ ಪಠಿಸುವಾಸೆ,
ಭಾರತಾಂಬೆಯನ್ನು ನಭದೆತ್ತರಕ್ಕೆ ಬೆಳಗಿಸುವಾಸೆ........
ಈ ಆಸೆಯ ಈಡೆರಿಸುವಾಸೆಗೆ ಬಲ ನೀಡುವರಾರು? ಯಾರು?
ಯಾರು? ........
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)